May 1, 2012

ಕತೆ ಅಂದುಕೊಂಡು ಗೀಚಿದ್ದು

ಶ್ಯಾಮರಾಯರು ಬೇಗ ಬೇಗ ನೆ ಮನೆಗೆ ಹೆಜ್ಜೆ ಹಾಕಿದರು. ಇವತ್ತು ಕಛೇರಿಯಲ್ಲಿ ಅವರ ಕೊನೆಯ ದಿನ. ಅಲ್ಲಿ ಈಗಾಗಲೇ ಬೀಳ್ಕೊಡುಗೆ ಸಮಾರಂಭ ಮುಗಿಸಿ ಹೊರಟಿದ್ದರು. ದಾರಿಯಲ್ಲಿ ಬರುತ್ತ ತಮ್ಮ ಪತ್ನಿಗೋಸ್ಕರ ಎರಡು ಮಾರು ಮಲ್ಲಿಗೆ ಹೂ ಮತ್ತು ಅವಳ ಇಷ್ಟದ ಜಿಲೇಬಿಗಳನ್ನು ಕಟ್ಟಿಸಿಕೊಂಡಿದ್ದರು. ಪತ್ನಿಗೆ ಇದರಿಂದ ಆಗುವ ಸೋಜಿಗವನ್ನು ಊಹಿಸಿಕೊಂಡು ರಾಯರ ನಡುಗೆ ಇನ್ನಷ್ಟು ಚುರುಕಾಯಿತು.
ಮನೆ ತಲುಪಿದಾಗ ಮನೆಗೆ ಬೀಗ ಹಾಕಿತ್ತು. ಪಕ್ಕದ ಮನೆಯ ಹುಡುಗಿ, ’ಆಂಟಿ ದೇವಸ್ಥಾನಕ್ಕೆ ಹೋಗಿದ್ದಾರೆ. ಬರುವುದು ತಡವಾಗುತ್ತಂತೆ’ ಅಂತ ಅವರಿಗೆ ಮನೆಯ ಬೀಗದ ಕೈ ಯನ್ನು ಕೊಟ್ಟಳು. ರಾಯರಿಗೆ ತುಂಬ ಬೇಸರ ಆಯ್ತು.
ರಾತ್ರಿ ಸಾಧಾರಣ 8.30 ಸುಮಾರಿಗೆ ಸಾವಿತ್ರಮ್ಮ ಮನೆಗೆ ಮರಳಿದರು. ರಾಯರು ಆಕ್ಷೇಪ ವೆತ್ತಿದರು. ’ಇವತ್ತು ನಿನಗೋಸ್ಕರ ಬೇಗ ಬಂದೆ. ನಿನಗೊತ್ತಿತ್ತಲ್ಲವ ಇವತ್ತು ನನ್ನ ಸರ್ವಿಸ್ ನ ಕೊನೆ ದಿನ ಅಂತ..’
ಹೌದು..ನೀವು ದಿನ ನಿತ್ಯದ ಹಾಗೆ ಕಛೇರಿ ಕೆಲಸ ಮುಗಿಸಿ ಕ್ಲಬ್ ಗೆ ಹೋಗುತ್ತೀರಿ ಅಂದುಕೊಂಡೆ, ದೇವಸ್ಥಾನದಲ್ಲಿ ಇವತ್ತು ಚೆಂದದ ಹರಿಕತೆ ಹಮ್ಮಿಕೊಂಡಿದ್ದರು, ನಾನು ಕಮಲಮ್ಮ ಈ ಕಾರ್ಯಕ್ರಮಕ್ಕೆ ಹೋಗುವುದನ್ನು ಮೊದಲೇ ನಕ್ಕಿ ಮಾಡಿಕೊಂಡಿದ್ದೆವು. "
ಅಷ್ಟರೊಳಗೆ ಮಲ್ಲಿಗೆ ಹೂ ಬಾಡಿತ್ತು, ಜಲೇಬಿಗೆ ಇರುವೆಗಳು ಮುತ್ತಿಕೊಂಡಿದ್ದವು...
ಮರುದಿನ ಸಾವಿತ್ರಮ್ಮನಿಗೆ ಏನೋ ಇರುಸುಮುರುಸು. ದಿನ ರಾಯರು ಬೆಳಿಗ್ಗೆ ಒಂಬತ್ತು ಗಂಟೆಗೆ ಮನೆ ಬಿಟ್ಟರೆ ಬರುತ್ತಿದ್ದದ್ದೆ ರಾತ್ರಿ ಒಂಬತ್ತಕ್ಕೆ. ಒಂದು ದಿನ ಕೂಡ ಬೇಗ ಬಂದಿದ್ದಿಲ್ಲ. ಇದ್ದ ಒಬ್ಬನೆ ಮಗ ರಾಜೀವನ ಬಾಲ್ಯ- ಬೆಳವಣಿಗೆ, ಸ್ಕೂಲು, ಕಾಲೇಜು, ಕಾಯಿಲೆ-ಕಸಾಲೆ ಗಳೆದ್ದಕ್ಕೂ ಸಾವಿತ್ರಮ್ಮನೆ ಓಡಾಡಿದ್ದು. ಅವನೂ ಇಂಜಿನಿಯರಿಂಗ್ ಓದಿ ವಿದೇಶಕ್ಕೆ ಹಾರಿದ. ಅಲ್ಲಿಯ ಒಬ್ಬಳನ್ನೆ ಮದುವೆ ಕೂಡ ಮಾಡಿಕೊಂಡ. ಇನ್ನೂ ಅವರ ಸೊಸೆಯನ್ನು ಕಂಡಿಲ್ಲ ಸಾವಿತ್ರಮ್ಮ. ಒಂದು ಹಂತಕ್ಕೆ ಮಗನ ಜವಾಬ್ದಾರಿ ಮುಗಿದ ಮೇಲೆ ಸಾವಿತ್ರಮ್ಮ ಟಿವಿ ನೋಡುವುದು, ಅಕ್ಕ ಪಕ್ಕದವರ ಜತೆ ಹರಟೆ ಹೊಡೆಯುವುದು, ಸಂಜೆ ಅವರ ಜತೆ ಪೇಟೆ, ವಾಕ್, ದೇವಸ್ಥಾನ ಅಷ್ಟಲ್ಲದೆ ವರ್ಷಕ್ಕೊಂದು ಸಲ ಪಕ್ಕದ ತ್ರೀವೇಣಮ್ಮನ ಜತೆ ಕಂಡಕ್ಟಡ್ ಟೂರ್ ಗೆ ಒಂದು ವಾರ-ಹತ್ತು ದಿನಗಳ ಮಟ್ಟಿಗೆ ಹೋಗಿ ಬರುವುದು ಇತ್ತೀಚಿನ ಹದಿನೈದು ವರ್ಷಗಳಲ್ಲಿ  ರೂಢಿ ಮಾಡಿಕೊಂಡು ಬಿಟ್ಟಿದ್ದರು. ಈಗ ರಾಯರು ಮನೆಯಲ್ಲೇ ಇರುವುದರಿಂದ ಅವರಿಗೆ ಕಿರಿಕಿರಿ ಯೆನಿಸುತ್ತಿತ್ತು. ಮೊದಲಾದರೆ ಸ್ನೇಹಿತೆಯರು ಹುಡುಕಿಕೊಂಡು ಬರುವುದು, ಇವರು ಮನೆ ಕೆಲಸ ಮಾಡುತ್ತಿದ್ದ ಹಾಗೆ ಅವರೆಲ್ಲ ಮಾತನಾಡಿಸಿ, ಕೆಲವೊಮ್ಮೆ ಇವರ ಜತೆ ಊಟ ಮಾಡಿ ಹೋಗುವುದೂ ಇತ್ತು.
ರಾಯರ ಜತೆ ಏನು ಮಾತನಾಡಬೇಕೆಂದು ತಿಳಿಯುತ್ತಿರಲಿಲ್ಲ. ಉಳಿದ ದಿನ ಬಿಸಿ ನೀರು ಕಾದಿದೆ, ಕಾಫಿಗೆ ಬರುತ್ತೀರಾ, ಊಟ ಬಡಿಸಲೆ, ಸಾರು ಬಡಿಸಲೆ, ಹಾಸಿಗೆ ಹಾಕಿದೆ ಇವಷ್ಟಕ್ಕೆ ಸೀಮಿತವಾಗುತ್ತಿತ್ತು ಮಾತು. ಈಗ ದಿನ ಬೆಳಗಾದರೆ ಒಬ್ಬರಿಗೊಬ್ಬರು ಏನು ಮಾತನಾಡುವುದು ಎಂದು ತಡಕಾಡುವಂತಾಗಿದೆ ಸಾವಿತ್ರಮ್ಮನಿಗೂ ರಾಯರಿಗೂ. 
ಈ ದಿನ ಸಂಜೆ ಹೆಂಡತಿ ಮತ್ತು ತಾನು ವಾಕ್ ಹೋಗಬೇಕು ಅಂದುಕೊಂಡಿದ್ದರು ರಾಯರು ಆದರೆ ಸಾವಿತ್ರಮ್ಮ ಆಗಲೇ ಸ್ನೇಹಿತೆಯರ ಜತೆಗೆ ಬೇರೆಲ್ಲಿಗೋ ಹೋಗುವ ತಯಾರಿ ನಡೆಸಿದ್ದರು. ರಾಯರಿಗೆ ಸಿಟ್ಟು ಬಂತು.ಹೌದು ಇಷ್ಟು ದಿನ ನಿನಗೋಸ್ಕರ ಸಮಯ ಮೀಸಲಿಡಲಾಗಿಲ್ಲ ಆದರೆ ಈಗಲಾದರೂ ನಾವು ನಮ್ಮನ್ನು ಬದಲಾಯಿಸಿಕೊಳ್ಳಬಹುದಲ್ಲವಾ?’
ಸಾವಿತ್ರಮ್ಮ ’ಯಾಕೆ ಇವತ್ತು ಕ್ಲಬ್ ಕಡೆ ಹೋಗಲ್ಲವಾ?
ಇನ್ನು ಯಾವ ಕ್ಲಬ್? ಅದು ಕಛೇರಿವತಿಯಿಂದ ಮೆಂಬರ್ ಶಿಫ್..ಈಗ ನಿವೃತ್ತಿ ಪಡೆದುಕೊಂಡ ಮೇಲೆ ನಾನಲ್ಲಿ ಸೇರುವುದು ನಾನೆ ಕೈಯಿಂದ ದುಡ್ಡು ಹಾಕಬೇಕು. ಸಿಕ್ಕಾ ಪಟ್ಟೆ  ದುಬಾರಿ.
"ಕ್ಷಮಿಸಿ. ಇಷ್ಟು ವರ್ಷ ನಾನೂ ಎಷ್ಟೊ ಸಲ ನಿಮಗೆ ಈ ಮಾತನ್ನು ಹೇಳಿದ್ದೇನೆ. ಕಛೇರಿ ಬಿಡಿ, ಒಂದು ದಿನವಾದರೂ ಕ್ಲಬ್ ಹೋಗೋದು ಬಿಟ್ಟು ನನಗೋಸ್ಕರ ಮನೆಗೆ ಬಂದಿದ್ದಿದೇಯೇ?? ಮದುವೆಯಾಗಿ ಈ ಮನೆಗೆ ಬಂದಾಗ ಸರಿ, ಅತ್ತೆ, ಮಾವ, ನಾದಿನಿಯರು ಇದ್ದರು. ಹೇಗೋ ನಡೆದು ಹೋಯ್ತು. ಆಮೇಲೆ ನಾನೆ ಒಂಟಿಯಾಗಿ ಈ ಮನೆಯಲ್ಲಿ ಇರುತ್ತಿರಲಿಲ್ಲವಾ? ರಾಜೀವನಿಗೆ ಆ ದಿನ ಕೆಟ್ಟ ಜ್ವರ ಬಂದು ಆಸ್ಪತ್ರೆಗೆ ನೆರೆಯವರ ಸಹಾಯದಿಂದ ಕರೆದುಕೊಂಡೆ ಹೋದೆ, ಮರುದಿನ ರಜೆ ಹಾಕಿ ಇದ್ದಿದ್ದರೆ ನನಗೆ ಸ್ವಲ್ಪ ಸಹಾಯ ಆಗುತ್ತಿರಲಿಲ್ಲವಾ??ನನಗೀಗ ಒಂಟಿಯಾಗಿರುವುದು ರೂಢಿಯಾಗಿದೆ. ದಯವಿಟ್ಟು ನೀವು ಬೇರೆ ಯಾವುದಾದರೂ ಕ್ಲಬ್ ಅಥವ ಪಾಸ್ ಟೈಮ್ ಹುಡುಕಿ. ದುಡ್ಡಿಗೇನೂ ಕೊರತೆಯಿಲ್ಲ. ನಿಮ್ಮ ಪೆನ್ ಶನ್, ಮಗನೂ ತಿಂಗಳು ತಿಂಗಳು ಬೇಡವೆಂದರೂ ದುಡ್ಡು ಕಳುಹಿಸುತ್ತಾನೆ.  ಅಂದುಕೊಂಡು ಸ್ನೇಹಿತೆಯರ ಜತೆ ಹೊರಟೆ ಬಿಟ್ಟರು
ರಾಯರು ಅವಾಕ್ಕಾದರು............
(ಇವತ್ತು ಗಾರ್ಡನ್ ನಲ್ಲಿ ವಾಕ್ ಮಾಡ್ತಾ ಕೇಳಿಸಿಕೊಂಡ  ಬಿಡಿ ಬಿಡಿ ಸಂಭಾಷಣೆಯ ಮೇಲೆ ಆಧಾರಿತ...ನಮ್ಮ ರಾಯರು ಮುಂಬೈಯಿಂದ ಈಗ ಬರುತ್ತಾರೆ...ಅವರಿಗೆ ಕಾಯುತ್ತ....ಇದಷ್ಟು ಬರೆದೆ...ಒಂಚೂರು ಇಂಗ್ಲಿಷ್ ಬಳಸಿಲ್ಲ)
:-) Happy May Day...ಎಲ್ಲರಿಗೂ

12 comments:

neelesh said...

nice story liked it

nenapina sanchy inda said...

sum-sumne telling alwaa?/
:-)
malathi S

kalsakri said...

ಕತೆಯ ಕೊನೆಗೆ
:(

Anonymous said...

Nice interesting story!
Typical of how the modern male devotes so little time to his best half until retirement.

However, just for the sake of nitpicking for a change here goes...

"ಒಂಚೂರು ಇಂಗ್ಲಿಷ್ ಬಳಸಿಲ್ಲ "

ಗಾರ್ಡನ್ ನಲ್ಲಿ ವಾಕ್
ಸರ್ವಿಸ್
ಮೆಂಬರ್ ಶಿಫ್
ಪಾಸ್ ಟೈಮ್
ಪೆನ್ ಶನ್
Happy May Day

-- Shee Kar

nenapina sanchy inda said...

Kalsakri: what a nice sweet name..but u dont blog..

Shree Kar :-) u forgot aunty, club etc...what i meant here was excepting 'Happy May Day' i have
not used English letters in the entire post...(am i making sense??) LOL
one day i will write in 'acchakannada'
thank u ...
ms

Radhika said...

Good one Malathi! Forget about post retirement, this is true for alltime if there's a change in routine!

nenapina sanchy inda said...

Dear Radhika!
thank you...u r right..times are changing i feel for the worse than better....kya kare??!
Just returned from British Library...overheard a strange case being discussed by two lawyers who got into our bus cos their car got stalled..will blog abt it soon
:-)
ms

Radhika said...

@Malathi, looking forward for the next post. You seem to find interesting stuff all around you!

ದಿವ್ಯಾ ಮಲ್ಯ ಕಾಮತ್ said...

Good short story mS :-) Liked it!!

nenapina sanchy inda said...

@ Radhika: will do so soon..its interesting /bit bold stuff..but i dont know how it will be received

@Divya: thanks ammaNi...
:-)
ms

Anonymous said...

ಕತೆ ಚಿಕ್ಕದಾರೂ ಅದರಿಂದ ನೀವು ಕೊಟ್ಟ ಸಂದೇಶ ದೊಡ್ಡದು ... ದುಡ್ಡು ಎಂಬ ಹಗಲು ಕನಸಿನ ಬೆನ್ನೇರಿ ಹೋಗುವ ಯುವ ಪೀಳಿಗೆಗೆ ಉತ್ತಮ ಸಂದೆಶವಿದು ...
http://nenapinasanchi.wordpress.com/

nenapina sanchy inda said...

thank u nenapina sanchi(blog hesaru matching matching)...nim blog parichaya nanage Nataraju moolaka aagiddu. barteertEne nimma blog ge
thanks for coming here..
:-)
malathi S